ಅರಸೀಕೆರೆ ಪೊಲೀಸರ ಬಲೆಗೆ ಬಿದ್ದ ಖದೀಮರು: 16 ಬೈಕ್‌ಗಳ ಸಮೇತ ಮೂವರು ಅಂತರಜಿಲ್ಲಾ ಕಳ್ಳರ ಬಂಧನ

Davanagere:

Font size:

ಲಕ್ಷಾಂತರ ಮೌಲ್ಯದ ಬೈಕ್ ಎಗರಿಸಿ ಎಸ್ಕೇಪ್ ಆಗುತ್ತಿದ್ದ ಅಪ್ತಾಫ್ ಆಂಡ್ ಗ್ಯಾಂಗ್ ಈಗ ಅರೆಸ್ಟ್; 6.65 ಲಕ್ಷದ ಸೊತ್ತು ಪೊಲೀಸ್ ವಶಕ್ಕೆ

ಹರಪನಹಳ್ಳಿ: ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಅರಸೀಕೆರೆ ವ್ಯಾಪ್ತಿಯಲ್ಲಿ ಸರಣಿ ಬೈಕ್ ಕಳ್ಳತನ ಮಾಡಿ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದ್ದ ಅಂತರಜಿಲ್ಲಾ ಬೈಕ್ ಕಳ್ಳರ ಜಾಲವನ್ನು ಅರಸೀಕೆರೆ ಪೊಲೀಸರು ಭೇದಿಸಿದ್ದಾರೆ. ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ 16 ಬೈಕ್‌ಗಳನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

​ಅರಸೀಕೆರೆಯ ಅಪ್ತಾಫ್ (23), ಜಾಬೀರ್ (29) ಹಾಗೂ ಶಾಹೀದ್ ಅಹಮ್ಮದ್ (20) ಬಂಧಿತ ಆರೋಪಿಗಳಾಗಿದ್ದು, ಇವರು ಹರಪನಹಳ್ಳಿ ಸೇರಿದಂತೆ ಸುತ್ತಮುತ್ತಲ ವಿವಿಧ ಭಾಗಗಳಲ್ಲಿ ಬೈಕ್ ಕಳ್ಳತನವನ್ನೇ ವೃತ್ತಿ ಮಾಡಿಕೊಂಡಿದ್ದರು. ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸುತ್ತಿದ್ದ ಬೈಕ್‌ಗಳನ್ನು ನಕಲಿ ಕೀ ಬಳಸಿ ಕ್ಷಣಾರ್ಧದಲ್ಲಿ ಎಗರಿಸುತ್ತಿದ್ದ ಈ ಖದೀಮರು, ಅವುಗಳನ್ನು ಬೇರೆಡೆ ಮಾರಾಟ ಮಾಡಲು ಸಂಚು ರೂಪಿಸುತ್ತಿದ್ದರು. ಕಳ್ಳತನದ ಬಗ್ಗೆ ಸರಣಿ ದೂರುಗಳು ದಾಖಲಾದ ಹಿನ್ನೆಲೆಯಲ್ಲಿ ಗಂಭೀರವಾಗಿ ಪರಿಗಣಿಸಿದ ಪೊಲೀಸರು, ವಿಶೇಷ ತಂಡ ರಚಿಸಿ ಕಾರ್ಯಾಚರಣೆಗೆ ಇಳಿದಿದ್ದರು.

​ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳತನದ ರಹಸ್ಯ ಬಯಲಾಗಿದೆ. ಬಂಧಿತರಿಂದ ಸುಮಾರು 6 ಲಕ್ಷ 65 ಸಾವಿರ ರೂಪಾಯಿ ಮೌಲ್ಯದ ಒಟ್ಟು 16 ಬೈಕ್‌ಗಳನ್ನು ಜಪ್ತಿ ಮಾಡಲಾಗಿದೆ. ಈ ಕುರಿತು ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪೊಲೀಸರ ಈ ಸಮಯೋಚಿತ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.

Comments

Leave a Comment

Prev Post ನೈರುತ್ಯ ರೈಲ್ವೆಯಲ್ಲಿ ಕನ್ನಡಕ್ಕೆ ಎಳ್ಳುನೀರು: ಕೇಂದ್ರ ಸರ್ಕಾರದ ‘ಹಿಂದಿ ಹೇರಿಕೆ’ಗೆ ಕನ್ನಡಿಗರ ಆಕ್ರೋಶ
Next Post ​15 ವರ್ಷಗಳ ಹೈಡ್ರಾಮಾ ಅಂತ್ಯ: ಗೋವಾದಲ್ಲಿ 'ಖಾಕಿ' ಪಂಜಕ್ಕೆ ಬಿದ್ದ ಸಕಲೇಶಪುರದ ಖತರ್ನಾಕ್ ಕಿಲಾಡಿ!

ಆಮಿರ್ ಖಾನ್, ಅಜಯ್ ದೇವಗನ್, ಅಕ್ಷಯ್ ಕುಮಾರ್ ಸಿನಿಮಾಗಳ ಹಿಂದಿಕ್ಕಿದ ‘ಕಾಂತಾರ 1’

Kantara Chapter 1 box office: ‘ಕಾಂತಾರ: ಚಾಪ್ಟರ್ 1’ ಸಿನಿಮಾ ತಮಿಳುನಾಡು, ಆಂಧ್ರ, ತೆಲಂಗಾಣಗಳಲ್ಲಿ 100 ಕೋಟಿಯ ಗಡಿಯತ್ತ ಸಿನಿಮಾ ದಾಪುಗಾಲು ಹಾಕಿದ್ದು ಆಯಾ ರಾಜ್ಯಗಳಲ್ಲಿ ಕೆಲ ಹೊಸ ದಾಖಲೆಗಳನ್ನು ಸಹ ಬರೆದಿದೆ. ಉತ್ತರ ಭಾರತದಲ್ಲಿ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುತ್ತಿದ್ದು, ಈಗಾಗಲೇ ಆಮಿರ್ ಖಾನ್, ಅಜಯ್ ದೇವಗನ್, ಅಕ್ಷಯ್ ಕುಮಾರ್ ಅವರ ಹಿಟ್ ಸಿನಿಮಾಗಳ ಗಳಿಕೆಯ ದಾಖಲೆಗಳನ್ನೇ ಮುರಿದು ಹಾಕಿದೆ.

ಬಾರದ ಲೋಕಕ್ಕೆ ಹೋದ ‘ಉಷಾ’: ತಪ್ಪು ಒಪ್ಪಿಕೊಂಡರೂ ಮನ್ನಿಸಲಿಲ್ಲವೇ ಈ ಸಮಾಜ?

​"ನಾನು ತಪ್ಪು ಮಾಡಿದ್ದು ನಿಜ, ಆದ್ರೆ ಈ ಕಿರುಕುಳ ತಾಳಲಾರೆ.." - ಕಣ್ಣೀರು ಹಾಕುತ್ತಲೇ ಸಾವಿನ ಮನೆ ಸೇರಿದ ಅಬಲೆ!

ಧಾರವಾಡ ಸೆಂಟ್ರಲ್ ಜೈಲ್ 'ಡ್ರಗ್ಸ್' ದಂಧೆ ಅಡ್ಡ: ಬೇಲಿಯೇ ಎದ್ದು ಹೊಲ ಮೇಯ್ದ ರಣರೋಚಕ ಸ್ಟೋರಿ!

ಕತ್ತಲಲ್ಲಿ ಖೈದಿಗಳಿಗೆ 'ಕಿಕ್' ನೀಡುತ್ತಿದ್ದ ಖಾಕಿಧಾರಿಗಳು: ಮುತಾಲಿಕ್ ಎಚ್ಚರಿಕೆ ಬೆನ್ನಲ್ಲೇ ಪೊಲೀಸರ ಮಿಡ್‌ನೈಟ್ ಆಪರೇಷನ್ ಸಕ್ಸಸ್!

ಮಂಗಳೂರಿನಲ್ಲಿ ನೆತ್ತರು ಹರಿಸಿದ ಗ್ಯಾಂಗ್‌ವರ್: ತೊಕ್ಕೊಟ್ಟು ಫ್ಲೈಓವರ್ ಮೇಲೆ 'ಟಾಬ್ಲೆಟ್ ಆರಿಫ್' ಭೀಕರ ಕೊಲೆ!

ಸಿನಿಮೀಯ ಮಾದರಿಯಲ್ಲಿ ನಡೆದ ಹತ್ಯೆ: ಬೈಕ್ ಸವಾರನ ಮೇಲೆ ಕಾರ್ ಹರಿಸಿ, ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾದ ದುಷ್ಕರ್ಮಿಗಳು!

ತುಂಗಭದ್ರಾ ನದಿಯ ಮಡಿಲಲ್ಲಿ ಕರಗಿದ ಕನಸುಗಳು: ಒಂದೇ ಕುಟುಂಬದ ನಾಲ್ವರ ದುರಂತ ಅಂತ್ಯ

ಮದುವೆಯ ಸಂಭ್ರಮದ ನಡುವೆ ಮರಣ ಮೃದಂಗ: ರಾಯಚೂರು ಕುಟುಂಬದಲ್ಲಿ ಆವರಿಸಿದ ಶೋಕದ ಕಾರ್ಮೋಡ

ಶಿವಮೊಗ್ಗದ ಲಯನ್ ಸಫಾರಿಯಲ್ಲಿ ಬೆಚ್ಚಿಬೀಳಿಸುವ ಸತ್ಯಗಳು ಬಯಲು: ಡಾ. ಸಮೀಕ್ಷಾ ರೆಡ್ಡಿ ಸಾವಿನ ಸುತ್ತ ನಿಗೂಢ ಜಾಲ!

ಅಲ್ಲಿ ಎಲ್ಲವೂ ಸರಿಯಿಲ್ಲ!" - ವೈದ್ಯೆಯ ಕೊನೆಯ ವಾಟ್ಸಪ್ ಸಂದೇಶಗಳು ಬಯಲು ಮಾಡಿದ ಭೀಕರ ವಾಸ್ತವ!

Read all News